ಆಗ ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಎಂಬವರು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು, ಸೊಲೊಮೋನನನ್ನು ಅರಸ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.