ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ಸರ್ವೇಶ್ವರ ಅದನ್ನು ಕೈಗೆ ಒಪ್ಪಿಸುವರು,” ಎಂದರು.