ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾದರು. “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರೆಂಬುದು ನಿಮಗೆ ಗೊತ್ತೇ?” ಎಂದು ಕೇಳಿದರು. ಅದಕ್ಕೆ ಎಲೀಷನು, “ನನಗೆ ಗೊತ್ತಿದೆ; ಆದರೆ ನೀವು ಸುಮ್ಮನಿರಿ,” ಎಂದನು.