ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ ಶತಾಧಿಪತಿಗಳಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಮಾಡಿ, ಹೊರಗೆ ಕರೆದುಕೊಂಡು ಹೋಗಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.