ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.
Go to Home Page