ಇದಲ್ಲದೆ ಜುದೇಯದ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಬಲಿಪೀಠಗಳನ್ನು ಹಾಗು ಮನಸ್ಸೆಯು ಸರ್ವೇಶ್ವರನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಬಲಿಪೀಠಗಳನ್ನು ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.