ದಾವೀದನೂ ಜನರೂ ಜುದೇಯದಲ್ಲಿ ‘ಬಾಳಾ’ ಎಂದು ಹೆಸರುಗೊಂಡಿದ್ದ ಕಿರ್ಯತ್ಯಾರೀಮ ಪಟ್ಟಣಕ್ಕೆ ಮಂಜೂಷವನ್ನು ತರಲು ಹೋದರು. ಆ ಮಂಜೂಷವು ಕೆರೂಬಿಯರ ನಡುವೆ ಆಸೀನರಾಗಿರುವ ಸರ್ವೇಶ ದೇವರ ನಾಮದಿಂದ ಸುಪ್ರಸಿದ್ಧವಾಗಿತ್ತು.