ಹೀಗೆ ದಾವೀದ ಬಾಳ್ ಪೆರಾಚೀಮ್ ಎಂಬಲ್ಲಿ ಅವರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. “ಕಟ್ಟೆಯೊಡೆದ ಪ್ರವಾಹದಂತೆ ನುಗ್ಗಿ, ವೈರಿಸೈನ್ಯವನ್ನು ನಾಶಮಾಡಲು ಸರ್ವೇಶ್ವರ ನನ್ನನ್ನು ಉಪಯೋಗಿಸಿದ್ದಾರೆ,” ಎಂದು ಹೇಳಿದನು. ಈ ಕಾರಣ ಆ ಸ್ಥಳಕ್ಕೆ ‘ಬಾಳ್ ಪೆರಾಚೀಮ್’ ಎಂಬ ಹೆಸರು ಬಂದಿತು.