ಬಳಿಕ ಅರಸ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ದೇವರೇ, ಸರ್ವೇಶ್ವರಾ, ನನ್ನಂಥವನಿಗೆ ತಾವು ಈ ಪದವಿಯನ್ನು ಅನುಗ್ರಹಿಸಿದ್ದೀರಿ; ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!