ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದರು. ಬಹಳವಾಗಿ ಅಪಮಾನಹೊಂದಿದ ಅವರಿಗೆ ಆಗ ದಾವೀದನು ಆಳುಗಳ ಮುಖಾಂತರ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಜೆರಿಕೋವಿನಲ್ಲಿದ್ದು ಅನಂತರ ಬನ್ನಿ,” ಎಂದು ಹೇಳಿಸಿದನು.