ಈ ಪ್ರಮಾಣದ ನಿಮಿತ್ತ ಯೆಹೂದ್ಯರೆಲ್ಲರಿಗೆ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಲವಲವಿಕೆಯಿಂದ ಸರ್ವೇಶ್ವರನನ್ನು ಬಯಸಿದ ಕಾರಣ, ಸರ್ವೇಶ್ವರ ಅವರಿಗೆ ಪ್ರಸನ್ನರಾಗಿ ಎಲ್ಲಾ ಕಡೆಗಳಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು.