ಆದರೂ ಸರ್ವೇಶ್ವರ ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿ ಹೇಳಿದ್ದರಿಂದ ಆ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.