ಅವನಿಗಿರುವ ಸಹಾಯ ಮೂಳೆ ಮಾಂಸದ ತಡಿಕೆಯ ಬಲ; ನಮಗಿದ್ದಾರೆ ನಮ್ಮ ದೇವರಾದ ಸರ್ವೇಶ್ವರ. ಅವರೇ ನಮಗೆ ನೆರವಾಗಿ, ಯುದ್ಧಗಳಲ್ಲಿ ನಮ್ಮ ಪರವಾಗಿ ಕಾದಾಡುವರು,” ಎಂದು ಹೇಳಿ ಹುರಿದುಂಬಿಸಿದನು. ಜನರು ಜುದೇಯದ ಅರಸ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.