ಕಟ್ಟುವವರು ಸರ್ವೇಶ್ವರನ ಮಂದಿರದ ಅಸ್ತಿವಾರವನ್ನು ಹಾಕಿದಾಗ, ಇಸ್ರಯೇಲರ ಅರಸ ದಾವೀದನು ನೇಮಿಸಿದ ಕ್ರಮಕ್ಕನುಸಾರ, ಸರ್ವೇಶ್ವರನನ್ನು ಸಂಕೀರ್ತಿಸಿದರು. ಇದಕ್ಕಾಗಿ ದೀಕ್ಷಾವಸ್ತ್ರ ಭೂಷಿತರಾದ ಯಾಜಕರು ತುತೂರಿಗಳೊಡನೆ ಹಾಗು ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆ ನಿಂತುಕೊಂಡು,