ಜನರೆಲ್ಲರು ಧರ್ಮೋಪದೇಶದ ವಾಕ್ಯಗಳನ್ನು ಕೇಳುತ್ತಾ ಕಣ್ಣೀರಿಡುತ್ತಿದ್ದರು. ರಾಜ್ಯಪಾಲ ನೆಹೆಮೀಯನು, ಧರ್ಮೋಪದೇಶ ಮಾಡುವ ಯಾಜಕ ಎಜ್ರನು ಹಾಗು ಜನರನ್ನು ಸಂಬೋಧಿಸುತ್ತಿದ್ದ ಲೇವಿಯರು ಜನರಿಗೆ, “ಈ ದಿನ ನಿಮ್ಮ ದೇವರಾದ ಸರ್ವೇಶ್ವರನಿಗೆ ಪರಿಶುದ್ಧ ದಿನ! ಆದುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿ,” ಎಂದು ಹೇಳಿದರು.
Go to Home Page