ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.