ಹಿಜ್ಕೀಯನು ನಿಮಗೆ, ‘ಸರ್ವೇಶ್ವರ ಸ್ವಾಮಿಯಲ್ಲಿ ನಂಬಿಕೆಯಿಡಿ; ಅವರು ನಿಮ್ಮನ್ನು ಹೇಗಾದರೂ ಮಾಡಿ ರಕ್ಷಿಸುವರು; ಈ ಪಟ್ಟಣವು ಅಸ್ಸೀರಿಯದ ರಾಜನ ವಶವಾಗುವುದಿಲ್ಲ,’ ಎಂಬುದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿ, ಒಪ್ಪಿಕೊಳ್ಳಬೇಡಿ.