ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.