ಜುದೇಯದಲ್ಲಿ ಸಾರಿರಿ; ಜೆರುಸಲೇಮಿನಲ್ಲಿ ಪ್ರಕಟಿಸಿರಿ. ನಾಡಿನಲ್ಲೆಲ್ಲ ಕೊಂಬೂದುತ್ತಾ ಆಜ್ಞಾಪಿಸಿರಿ. ‘ಕೂಡಿಬನ್ನಿ, ಕೋಟೆಕೊತ್ತಲಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ’ ಎಂದು ಕೂಗಿ ಹೇಳಿರಿ.