ಸರ್ವಶಕ್ತರಾದ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಇಸ್ರಯೇಲಿನ ಅಳಿದುಳಿದವರನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯ್ದುಕೊ. ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನಿನ್ನ ಕೈಯನ್ನು ಮತ್ತೆ ರೆಂಬೆಗಳಿಗೆ ಹಾಕು.”