‘ನಾವೆಲ್ಲಿಗೆ ಹೋಗಬೇಕು?’ ಎಂದು ಕೇಳಿಯಾರು. ಆಗ ನೀನು ಅವರಿಗೆ : ‘ಇದು ಸರ್ವೇಶ್ವರನ ಸಂದೇಶ: ಮರಣವ್ಯಾಧಿಗೆ ಗೊತ್ತಾದವರು ಮರಣವ್ಯಾಧಿಗೆ ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಕ್ಷಾಮಕ್ಕೆ ಗೊತ್ತಾದವರು ಕ್ಷಾಮಕ್ಕೆ ಸೆರೆಗೆ ಗೊತ್ತಾದವರು ಸೆರೆಗೆ ಗುರಿಯಾಗಿ ಸಾಯುವರು’ ಎಂದು ಹೇಳು.