ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.