“ನಿನಗೆ ಖಂಡಿತವಾಗಿ ಮರಣದಂಡನೆಯಾಗಬೇಕು. ನೀನು ‘ಈ ದೇವಾಲಯಕ್ಕೆ ಶಿಲೋವಿನ ಗತಿ ಬರುವುದು, ಈ ನಗರ ಪಾಳುಬಿದ್ದು ನಿರ್ಜನ ಪ್ರದೇಶವಾಗುವುದು,’ ಎಂದು ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಿದ್ದೇಕೆ?” ಎಂದು ಕೂಗಾಡಿದರು. ಆಲಯದಲ್ಲಿದ್ದ ಯೆರೆಮೀಯನನ್ನು ಜನರ ಗುಂಪು ಮುತ್ತಿಕೊಂಡಿತು.