ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು, ಅವನ ಸಮಸ್ತ ಸೈನ್ಯವು, ಅವನ ಕೈಕೆಳಗಿನ ಭೂರಾಜರೆಲ್ಲರು ಹಾಗೂ ಸಕಲ ಪ್ರಜೆಗಳು ಜೆರುಸಲೇಮಿಗೂ ಅದಕ್ಕೆ ಸೇರಿದ ಎಲ್ಲ ಊರುಗಳಿಗೂ ವಿರುದ್ಧ ಯುದ್ಧಮಾಡುತ್ತಿದ್ದಾಗ ಸರ್ವೇಶ್ವರ ಯೆರೆಮೀಯನಿಗೆ ಈ ವಿಷಯವನ್ನು ತಿಳಿಸಿದರು: