ಯೆರೆಮೀಯನು ಜನರೆಲ್ಲರಿಗೆ, “ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: ನಗರದಲ್ಲಿ ನಿಲ್ಲುವವನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ಸಾಯುವನು. ನಗರವನ್ನು ಬಿಟ್ಟುಹೋಗಿ ಬಾಬಿಲೋನಿಯರನ್ನು ಮರೆಹೋಗುವವನು ಬದುಕುವನು. ತನ್ನ ಪ್ರಾಣವೊಂದನ್ನಾದರೂ ಬಾಚಿಕೊಂಡು ಹೋಗಿ ಬದುಕುವನು.