ತಾವು ಹೊರದೂಡಲ್ಪಟ್ಟು ವಾಸಮಾಡುತ್ತಿದ್ದ ಎಲ್ಲಾ ಊರುಗಳಿಂದ ಜುದೇಯಕ್ಕೆ ಹಿಂದಿರುಗಿದರು. ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ಸೇರಿಕೊಂಡರು. ದ್ರಾಕ್ಷಾರಸವನ್ನೂ ಹಣ್ಣುಹಂಪಲುಗಳನ್ನೂ ಹೇರಳವಾಗಿ ಕೂಡಿಸಿಕೊಂಡರು.