ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?