ಬಾಬಿಲೋನಿಯಾ ದೇಶದ ಕೇಬಾರ್ ನದಿಯ ಹತ್ತಿರ, ಬೂಜಿಯ ಮಗ ಹಾಗೂ ಯಾಜಕನಾದ ಯೆಜೆಕಿಯೇಲ ಎಂಬ ನನಗೆ ಸರ್ವೇಶ್ವರ ಸ್ವಾಮಿಯ ವಾಣಿ ನೇರವಾಗಿ ಕೇಳಿಸಿತು; ಅವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.