ಆಗ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಸರ್ವೇಶ್ವರನ ಆಲಯದ ಸಕಲ ನಿಯಮ ನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನದಟ್ಟು ಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನವಿಧಿಗಳನ್ನು ಗಮನಿಸು.