ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.