ಅದು ದೇವರಿಗೆ ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಯಾಜಕನು ಆ ಎಣ್ಣೆ ಬೆರಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಹಾಗು ಇಡೀ ಸಾಂಬ್ರಾಣಿಯನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.