ಅನಂತರ ಮೋಶೆ ಆರೋನನಿಗೆ, “ಬಲಿಪೀಠದ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಬಲಿಯನ್ನು ಮತ್ತು ದಹನಬಲಿಯನ್ನು ಸಮರ್ಪಿಸಿ ನಿನ್ನ ಹಾಗು ಜನರ ದೋಷವನ್ನು ಪರಿಹರಿಸು. ಜನರು ತಂದದ್ದನ್ನು ಸಮರ್ಪಿಸಿ ಸರ್ವೇಶ್ವರನ ಆಜ್ಞೆಯಂತೆ ಅವರ ದೋಷವನ್ನು ಪರಿಹರಿಸು,” ಎಂದು ಹೇಳಿದನು.