ಅನಂತರ ಜನರ ಪರವಾಗಿ ಶಾಂತಿಸಮಾಧಾನದ ಬಲಿದಾನಕ್ಕಾಗಿ ನೇಮಕವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು.