ಸರ್ವೇಶ್ವರ ಅಮೋರಿಯರನ್ನು ಇಸ್ರಯೇಲರಿಗೆ ವಶಪಡಿಸಿದ ದಿನದಂದು ಯೆಹೋಶುವನು ಸರ್ವೇಶ್ವರನಲ್ಲಿ ಒಂದು ವಿಜ್ಞಾಪನೆ ಮಾಡಿ ಇಸ್ರಯೇಲರ ಕಣ್ಮುಂದೆಯೇ, “ಸೂರ್ಯನೇ, ನೀ ನಿಲ್ಲು ಗಿಬ್ಯೋನಿನಲ್ಲೇ; ಚಂದ್ರನೇ, ನೀ ನಿಲ್ಲು ಅಯ್ಯಾಲೋನ್ ಕಣಿವೆಯಲ್ಲೇ” ಎಂದು ಆಜ್ಞಾಪಿಸಿದನು.