ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.