ಅವನು ಸಮುವೇಲನಿಗೆ, “ಹೋಗಿ ಮಲಗಿಕೋ; ಮತ್ತೆ ಅವರು ನಿನ್ನನ್ನು ಕರೆದರೆ, ‘ಸರ್ವೇಶ್ವರಾ, ಅಪ್ಪಣೆಯಾಗಲಿ; ತಮ್ಮ ದಾಸ ಕಾದಿದ್ದಾನೆ,’ ಎಂದು ಹೇಳು,” ಎಂದನು. ಸಮುವೇಲನು ಹಿಂದಿರುಗಿ ಹೋಗಿ ತನ್ನ ಸ್ಥಳದಲ್ಲೇ ಮಲಗಿಕೊಂಡನು.