ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು.