ತನ್ನ ಬಳಿಯಲ್ಲಿದ್ದ ಸಿಪಾಯಿಗಳಿಗೆ, “ನೀವು ಹಿಂದಿರುಗಿ ಸರ್ವೇಶ್ವರನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಪಲಾಯನ ಆದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ,” ಎಂದು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಸರ್ವೇಶ್ವರನ ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸುಮಾಡಲಿಲ್ಲ.
Go to Home Page