ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.
Go to Home Page