ರಾಜರು ಸಾಮಾನ್ಯವಾಗಿ ಯುದ್ಧಕ್ಕೆ ಹೊರಡುವ ವಸಂತಕಾಲ ಅದು. ದಾವೀದನು ಯೋವಾಬನನ್ನು, ತನ್ನ ಸೇವಕರನ್ನು ಹಾಗು ಎಲ್ಲ ಇಸ್ರಯೇಲರನ್ನು ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ದಾವೀದನು ಜೆರುಸಲೇಮಿನಲ್ಲೇ ಇದ್ದನು.