ಅವರು ಹೋದಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, “ಅಹೀತೋಫೆಲನು ನಿಮಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ; ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗಿ,” ಎಂದು ಹೇಳಿದರು.