ಇಸ್ರಯೇಲರು ಹೋದನಂತರ ಇವನು ಅಲ್ಲೇ ನಿಂತು, ಕತ್ತಿ ಹಿಡಿದು ಕೈಸೋತು ಮರಗಟ್ಟಿಹೋಗುವ ತನಕ, ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನ ಸರ್ವೇಶ್ವರ ಮಹಾಜಯವನ್ನುಂಟುಮಾಡಲು ಇಸ್ರಯೇಲರು ಸುಲಿದುಕೊಳ್ಳುವುದಕ್ಕಾಗಿಯೇ, ಹಿಂದಿರುಗಿದ್ದರು.