“ನೀನು ದಾವೀದನ ಹತ್ತಿರ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ; ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಅದನ್ನು ಆರಿಸಿಕೋ,’ ಎಂದು ಸರ್ವೇಶ್ವರ ನುಡಿಯುತ್ತಾರೆ ಎಂದು ಹೇಳು,” ಎಂದು ಆಜ್ಞಾಪಿಸಿದರು.