ಯೋವಾಬನು ಸರ್ವೇಶ್ವರನ ಗು಼ಡಾರಕ್ಕೆ ಓಡಿಹೋಗಿ ಬಲಿಪೀಠದ ಹತ್ತಿರ ಇದ್ದಾನೆ ಎಂಬ ಸುದ್ದಿ ಅರಸ ಸೊಲೊಮೋನನಿಗೆ ತಲುಪಿತು. ಅವನು ಯೆಹೋಯಾದಾವನ ಮಗ ಬೆನಾಯನಿಗೆ, “ಹೋಗಿ ಅವನನ್ನು ಕೊಂದುಹಾಕು,” ಎಂದು ಆಜ್ಞಾಪಿಸಿದನು.