“ಹೇ ಸರ್ವೇಶ್ವರಾ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಕಣ್ಣುಗಳನ್ನು ತೆರೆದರು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು.