ಅನಂತರ ರಾಜಗೃಹಾಧಿಪತಿ, ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರು ಎಲ್ಲರು ಕೂಡಿ ಯೇಹುವಿಗೆ, “ನಾವು ನಿಮ್ಮ ಆಜ್ಞಾಧಾರಕರಾದ ಸೇವಕರು, ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ; ನಿಮ್ಮ ಚಿತ್ತವೇ ನೆರವೇರಲಿ,” ಎಂದು ಹೇಳಿಕಳುಹಿಸಿದರು.