ಅನಂತರ ಯೇಹುವು ರೇಕಾಬನ ಮಗ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯ ಭಕ್ತರಿಗೆ, “ಸರ್ವೇಶ್ವರನ ಭಕ್ತರು ನಿಮ್ಮ ಮಧ್ಯೆ ಬಂದಿರುತ್ತಾರೋ ವಿಚಾರಿಸಿ ನೋಡಿ; ಬಾಳನ ಭಕ್ತರು ಮಾತ್ರ ಇಲ್ಲಿರಬೇಕು,” ಎಂದು ಹೇಳಿದನು.