ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು.