ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ದಂಗೆ ಎದ್ದನು. ಇವನು ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದನು. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದನು.