ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಿದ್ದೆನು. ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗಲೆಲ್ಲಾ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ’.”
Go to Home Page